Saturday, December 21, 2019

ಮೂಲ ವ್ಯಾಧಿ

ಕಾಡುವ ಮೂಲವ್ಯಾಧಿಗೆ ಸಿಂಪಲ್ ಮನೆ ಔಷಧಿ..

ಮೂಲವ್ಯಾಧಿ ಸಮಸ್ಯೆ ಇರುವವರು ಪಡೋ ಪಾಡು ಅಷ್ಟಿಷ್ಟಲ್ಲ. ಆಪರೇಷನ್ ಮಾಡಿಸಿಕೊಂಡರೂ, ಮತ್ತೊಂದು ರೀತಿ ಕಷ್ಟ ಎನ್ನುತ್ತಾರೆ.

ಮೂಲವ್ಯಾಧಿಯಿಂದ ಬಳಲುತ್ತಿರುವವರಿಗೆ ಮಲ ವಿಸರ್ಜನೆಗೆ ಹೋಗುವುದೆಂದರೆ ದೊಡ್ಡ ತಲೆ ನೋವು. ಹಾಗಂತ ಹೋಗದಿದ್ದರೆ ಮತ್ತೂ ಆಪತ್ತು. ಕೂರಲೂ ಆಗೋಲ್ಲ, ನಡೆಯಲೂ ಕಷ್ಟ. ಮೂಲವ್ಯಾಧಿ ಸಮಸ್ಯೆ ಇರುವವರು ಪಡೋ ಪಾಡು ಅಷ್ಟಿಷ್ಟಲ್ಲ. ಆಪರೇಷನ್ ಮಾಡಿಸಿಕೊಂಡರೂ, ಮತ್ತೊಂದು ರೀತಿ ಕಷ್ಟ ಎನ್ನುತ್ತಾರೆ. ಇದಕ್ಕೆ ಇಲ್ಲಿವೆ ಸಿಂಪಲ್ ಮನೆ ಮದ್ದು. ಟ್ರೈ ಮಾಡಿ. 
- ಲೋಳೆರಸದ ತಿರುಳನ್ನು ಒಂದು ಚಮಚೆಯಷ್ಟನ್ನು ದಿನಕ್ಕೆ ಮೂರು ಬಾರಿ ಸೇವಿಸಬೇಕು. - ಮುಟ್ಟಿದರೆ ಮುನಿ (ನಾಚಿಕೆ ಮುಳ್ಳು) ಇಡೀ ಸಸ್ಯವನ್ನು ಒಣಗಿಸಿ ಪುಡಿ ಮಾಡಿ ಒಂದು ಲೋಟ ನೀರಿಗೆ, ಒಂದು ಚಮಚ ಪುಡಿ ಬೆರೆಸಿ ಖಾಲಿ ಹೊಟ್ಟೆಗೆ ದಿನಕ್ಕೆರಡು ಬಾರಿ ಊಟಕ್ಕೆ ಮುಂಚೆ ಸೇವಿಸಬೇಕು. 

- ಹಾಲಿನಲ್ಲಿ ಒಣ ಖರ್ಜೂರ ಅಥವಾ ಉತ್ತುತ್ತಿ ರಾತ್ರಿ ಹೊತ್ತು ನೆನೆಸಿಟ್ಟು ಬೆಳಿಗ್ಗೆ ಹಾಲಿನ ಸಮೇತ ತಿನ್ನಬೇಕು. 

-50 ಮಿಲಿ ಈರುಳ್ಳಿ ರಸವನ್ನು ಸಿಹಿ ಮಜ್ಜಿಗೆಯಲ್ಲಿ ಬೆರೆಸಿ ಊಟದ ನಂತರ ಕುಡಿಯಬೇಕು. 

* ಹೊನಗೊನೆ ಸೊಪ್ಪಿನ ರಸ 20 ಮಿಲಿ, ಮೂಲಂಗಿ ಸೊಪ್ಪಿನ ರಸ 20 ಮಿಲಿ ಮತ್ತು ಒಂದು ಚಿಟಿಕೆ ಸೈಂಧವ ಲವಣ ಸೇರಿಸಿ ಪ್ರತಿದಿನ ಎರಡು ಹೊತ್ತು ಎರಡು- ಮೂರು ವಾರ ಕುಡಿಯಬೇಕು. 

- ಸುವರ್ಣ ಗೆಡ್ಡೆಯನ್ನು ಹೋಳು ಮಾಡಿ ಒಣಗಿಸಿ ಕುಟ್ಟಿ ಪುಡಿ ಮಾಡಿ ಈ ಪುಡಿಯನ್ನು 5 ಗ್ರಾಂನಷ್ಟನ್ನು ತುಪ್ಪ, ಜೇನುತುಪ್ಪ, ಬೆಲ್ಲ ಯಾವುದಾದರೊಂದರಲ್ಲಿ ಬೆರೆಸಿ ತಿನ್ನಬೇಕು. 

- ತುಳಸೀ ಬೀಜದ ಪುಡಿ 10 ಗ್ರಾಂ ಮತ್ತು ಒಂದು ಚಮಚ ಬೆಣ್ಣೆ, ಬೆಲ್ಲ ಬೆರೆಸಿ ದಿನಕ್ಕೆರಡು ಬಾರಿ ಸೇವಿಸಬೇಕು. 

- ಅಳಲೆಕಾಯಿ ಪುಡಿಯನ್ನು ಬೆಲ್ಲ ಸೇರಿಸಿ ತಿನ್ನಬೇಕು. 

- ಮೂಲಂಗಿ ರಸವನ್ನುಮಜ್ಜಿಗೆಯಲ್ಲಿ ಬೆರೆಸಿ ಕುಡಿಯಬೇಕು. 

- ಈರುಳ್ಳಿಯನ್ನು ಸಣ್ಣಗೆ ಹೆಚ್ಚಿಕೊಂಡು ತುಪ್ಪದಲ್ಲಿ ಹುರಿದು ಅನ್ನದೊಂದಿಗೆ ಸೇವಿಸಬೇಕು. 

- ಒಂದು ಚಮಚ ನೆಲ್ಲಿಕಾಯಿ ಪುಡಿಯನ್ನು ಮೊಸರಿನಲ್ಲಿ ಬೆರೆಸಿ ಸೇವಿಸಬೇಕು. 

- ಸೌತೆಕಾಯಿ ರಸ ಮತ್ತು ಮಜ್ಜಿಗೆಯನ್ನು ಬೆರೆಸಿ ಕುಡಿಯಬೇಕು. 

- 20 ಗ್ರಾಂ ಕೊತ್ತಂಬರಿ ಬೀಜ (ಧನಿಯ)ವನ್ನು ಪುಡಿ ಮಾಡಿ 4 ಲೋಟ ನೀರು ಹಾಕಿ ಕಷಾಯಕ್ಕಿಟ್ಟು ಒಂದು ಲೋಟಕ್ಕಿಳಿಸಿ ಶೋಧಿಸಿ ಹಾಲು, ಸಕ್ಕರೆ ಸೇರಿಸಿ ಪ್ರತಿದಿನ ಎರಡು ಹೊತ್ತು ಕುಡಿದರೆ ಒಳ್ಳೆಯದು. 

- ಆಗ ತಾನೇ ಕರೆದ ಹಾಲಿಗೆ ಒಂದು ನಿಂಬೆ ಹಣ್ಣಿನ ರಸ ಸೇರಿಸಿ ದಿನವೂ ಕುಡಿಯುವುದರಿಂದ ಮೂಲವ್ಯಾಧಿ ಗುಣವಾಗುತ್ತದೆ. 

- ಮೂಲವ್ಯಾಧಿ ಇರುವವರು ದಿನವೂ ಮಲಗುವ ಮುನ್ನ ಏಲಕ್ಕಿ ಪುಡಿಯೊಂದಿಗೆ ಬಾಳೆಹಣ್ಣನ್ನು ಸೇವಿಸುವುದರಿಂದ ಗುಣವಾಗುತ್ತದೆ. 

- ಮಾವಿನ ಗೊರಟೆ ಸಂಗ್ರಹಿಸಿ ನೆರಳಲ್ಲಿ ಒಣಗಿಸಿ ಪುಡಿಮಾಡಿ. ಈ ಪುಡಿ ಆಯುರ್ವೇದ ಅಂಗಡಿಯಲ್ಲೂ ಸಿಗುತ್ತದೆ. ಈ ಪುಡಿಯನ್ನು ದಿನಕ್ಕೆರಡು ಚಮಚ ಮುಂಜಾನೆ ಸಂಜೆ ಜೇನಿನೊಡನೆ ಸೇವಿಸಿ. 

- ರಕ್ತಸ್ರಾವವಿದ್ದ ಮೂಲವ್ಯಾಧಿಗೆ ನೇರಳೆ ಹಣ್ಣು ಬಹಳ ಒಳ್ಳೆಯದು. 

- ದಿನಕ್ಕೆ ಎಂಟು ಗ್ಲಾಸು ನೀರು ಕುಡಿಯುವುದು ಕಡ್ಡಾಯ. ನೀರು ಕಡಿಮೆ ಕುಡಿಯುವವರಿಗೇ ಮಲಬದ್ಧತೆ ಆಗುತ್ತದೆ. ಇದು ಮೂಲವ್ಯಾಧಿಗೆ ದಾರಿ ಮಾಡಿಕೊಡುತ್ತದೆ. 

- ಹುಣಸೆ ಚಿಗುರು ಮತ್ತು ಎಳೆ ಮಾವಿನಕಾಯಿಯನ್ನು ಬೇಯಿಸಿಕೊಂಡು ತಿಂದರೆ ಮೂಲವ್ಯಾಧಿ ಗುಣವಾಗುವುದು. 

- ಮೂಲವ್ಯಾಧಿಯಿಂದ ಬಳಲುವವರು ಮೂರು ಅಂಜೂರದ ಹಣ್ಣುಗಳನ್ನು ರಾತ್ರಿ ನೀರಿನಲ್ಲಿ ನೆನೆಸಿಟ್ಟು, ಬೆಳಗ್ಗೆ ತಿಂದು, ನೀರು ಕುಡಿದರೆ ಗುಣವಾಗುವುದು. 

- ಬಿಲ್ವ ಪತ್ರೆಯ ರಸವನ್ನು ನಿತ್ಯ ಬೆಳಗ್ಗೆ ೫-೬ ಚಮಚ ಸೇವಿಸಬೇಕು. 

- ೨ ಚಮಚ ಬಿಳಿ ಎಳ್ಳು , ೨ ಚಮಚ ಕಲ್ಲು ಸಕ್ಕರೆ , ೨ ಚಮಚ ಹಸುವಿನ ಬೆಣ್ಣೆಯನ್ನು ಅರೆದು ನಿತ್ಯ ಬೆಳಗ್ಗೆ ಸೇವಿಸಬೇಕು. 

- ರಾತ್ರಿ ೧ ಲೋಟ ನೀರಿಗೆ ೬ ಚಮಚ ಗರಿಕೆ ರಸ ಹಾಕಿ ಇಡಬೇಕು. ಮರುದಿನ ಬೆಳಗ್ಗೆ ಇದನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು. ಇದರಿಂದ ರಕ್ತ ಬೀಳುವುದು ನಿಲ್ಲುತ್ತದೆ. ಇದನ್ನು ೧೫ ರಿಂದ ೩೦ ದಿನಗಳ ಕಾಲ ಕುಡಿಯಬೇಕು. ಹೀಗೆ ಮಾಡಿದರೆ ದೇಹ ತಂಪಾಗುತ್ತದೆ. 

- ೪-೫ ಚಮಚ ಈಸಾಬ್‌ ಗೋಲನ್ನು (ತಂಪಿನ ಬೀಜ) ಪುಡಿ ಮಾಡಬೇಕು. ಇದನ್ನು ತಣ್ಣೀರಿನಲ್ಲಿ ಅಥವಾ ಹಾಲಿನಲ್ಲಿ ನೆನೆಸಿಟ್ಟು ಊಟದ ೧ ಗಂಟೆ ಮೊದಲು ಕುಡಿದರೆ ಮೊಳಕೆ ಯುಳ್ಳ ಮೂಲವ್ಯಾಧಿ ಹಾಗೂ ರಕ್ತ ಮೂಲವ್ಯಾದಿ ಎರಡೂ ಶಮನವಾಗುತ್ತವೆ. 

- ತ್ರಿಫಲಾ ಕಷಾಯ ಮೂಲವ್ಯಾಧಿ ಗುಣಪಡಿಸುವಲ್ಲಿ ತುಂಬಾ ಸಹಕಾರಿಯಾಗಿದೆ. 

ಮೊಳಕೆ ಹೋಗಿಸಲು ಮದ್ದೇನು? 

- ರಕ್ತಸ್ರಾವ ಬರಿಸುವ ಮೊಳಕೆಗಳ ನಿವಾರಣೆಗೆ ಟಬ್-ಬಾಥ್, ಖರ್ಜೂರದ ಬೀಜಗಳನ್ನು ಕುಟ್ಟಿ ಒಣಗಿಸಿ ಕೆಂಡದ ಮೇಲೆಹಾಕಿ ಅದರ ಹೊಗೆಯನ್ನು ಮೂಲವ್ಯಾಧಿಯ ಮೊಳಕೆಗಳಿಗೆ ತಾಗಿಸಬೇಕು. 

- ಹಾಲಿನಲ್ಲಿ ಬೆರಸಿ ಮೂಲಂಗಿಯನ್ನು ಅರೆದು ಪೇಸ್ಟ್ ಮಾಡಿ ಗುದದ್ವಾರದ ಸುತ್ತಲೂ ಹಚ್ಚಿದರೆ ಬಾವು ಕಡಿಮೆ ಆಗುತ್ತದೆ. 

 ಎಕ್ಕದ ಹಾಲಿಗೆ ಅರಿಶಿನ ಬೆರೆಸಿ ಮೂಲವ್ಯಾಧಿಯ ಮೊಳಕೆಗೆ ಹಚ್ಚಿದರೆ ಶಮನವಾಗುತ್ತದೆ. 

- ಎಕ್ಕದ ಎಲೆ ಹಾಗೂ ನುಗ್ಗೆ ಸೊಪ್ಪನ್ನು ಅರೆದು ಮೊಳಕೆಗೆ ಹಚ್ಚಿದರೆ ಗುಣವಾಗುತ್ತದೆ. 

- ನುಗ್ಗೆ ಸೊಪ್ಪು ಮತ್ತು ಮೂಲಂಗಿ ಸೊಪ್ಪನ್ನು ಅರೆದು ಹಚ್ಚಿದರೆ ಮೊಳಕೆಯ ನೋವು ಶಮನವಾಗುತ್ತದೆ. 

- ಲೋಳೆಸರದ ತಿರುಳಿಗೆ ಹರಳೆಣ್ಣೆ ಬೆರೆಸಿ ರಾತ್ರಿ ಹೊತ್ತು ಮತ್ತು ಬೆಳಿಗ್ಗೆ ಮಲವಿಸರ್ಜನೆಯ ಮುಂಚೆ ಮತ್ತು ನಂತರದ ಸಮಯದಲ್ಲಿ ಹಚ್ಚಿದರೆ ಮಲವಿಸರ್ಜನೆಗೆ ಕಷ್ಟವಾಗುವುದಿಲ್ಲ. ಇದರಿಂದ ನೋವು ಉಂಟಾಗುವುದಿಲ್ಲ .

No comments:

Post a Comment

ಶುಗರ್ ಹತೋಟಿಗೆ ತರಲು ಸುಲಭ ವಿಧಾನ:

ಎರಡು ಅಮೃತ ಬಳ್ಳಿ ಎಲೆಯನ್ನು ತೊಳೆದು ಸ್ವಚ್ಛ ಮಾಡಿ ನಂತರ ಜಜ್ಜಿ ರಸ ತೆಗೆದು ಎರಡು ಚಿಟಿಕೆ ಅರಿಶಿನ ಪುಡಿ ಹಾಕಿ ದಿನವೂ ಖಾಲಿ ಹೊಟ್ಟೆಯಲ್ಲಿ ಸೇವಿಸಿ 42 ದಿನ ಗಳಲ್ಲಿ ಶು...