ಅಪಾರ ವಿಟಮಿನ್-ಸಿ ಇರುವ ಹಣ್ಣು ಸೀತಾಫಲ. ಎಲ್ಲಾ ಕಾಲದಲ್ಲೂ ಈ ಹಣ್ಣು ಸಿಗುವುದಿಲ್ಲ. ದೊರಕುವಾಗ ದಿನಕ್ಕೆ ಒಂದು ಹಣ್ಣು ತಿನ್ನುವುದರಿಂದ ಅನೇಕ ರೋಗಗಳಿಂದ ದೂರವಿರಬಹುದು. ಬೇರೆ ಹಣ್ಣುಗಳಿಗೆ ಹೋಲಿಸಿದರೆ ಈ ಹಣ್ಣಿನಲ್ಲಿ ಕ್ಯಾಲೋರಿ ಹೆಚ್ಚು. ಇದರ ಇನ್ನಿತರ ಉಪಯೋಗಗಳು ಇಲ್ಲಿವೆ.
* ಹೃದಯ, ಎಲುಬು, ಚರ್ಮ ರಕ್ಷಣೆಗೆ ಸೀತಾಫಲ ಒಳ್ಳೆಯದು. ಇದರಲ್ಲಿರುವ ಪೊಟ್ಯಾಶಿಯಂ ಹೃದಯಬೇನೆ, ಪಾರ್ಶ್ವವಾಯು ಬರದಂತೆ ನೋಡಿಕೊಳ್ಳುತ್ತದೆ.
* ಕ್ರಮವಾಗಿ ಈ ಹಣ್ಣು ಸೇವಿಸುವವರಲ್ಲಿ ಕೀಲುನೋವು, ಆರ್ಥ್ರೈಟಿಸ್ ಬರುವ ಸಾಧ್ಯತೆ ಕಮ್ಮಿ. ಇದು ನೋವು ನಿವಾರಕ ಮತ್ತು ಹೊಟ್ಟೆಯಲ್ಲಿನ ಅಲ್ಸರ್ ಅನ್ನು ಗುಣಪಡಿಸುತ್ತದೆ.
* ಇದರಲ್ಲಿನ ನಾರು ಸತ್ವ ಜೀರ್ಣಕ್ರಿಯೆಗೆ ಒಳ್ಳೆಯದು. ಇದು ಕೊಲೆಸ್ಟ್ರಾಲ್ ತಗ್ಗಿಸಿ ರಕ್ತದಲ್ಲಿ ಗ್ಲೂಕೋಸ್ ಪ್ರಮಾಣವನ್ನು ನಿಯಂತ್ರಿಸುತ್ತದೆ.
* ಇದರಲ್ಲಿ ವಿಟಮಿನ್ ಎ ಅಧಿಕವಾಗಿರುತ್ತದೆ. ಇದು ದೃಷ್ಟಿ ಸ್ಪಷ್ಟತೆಗೆ ಸಹಾಯಕವಾಗಿದೆ.
* ಗರ್ಭಿಣಿಯರಿಗೆ ಇದೊಂದು ಉತ್ತಮ ಆಹಾರ. ವಾಂತಿ, ವಿಕಾರ, ರಕ್ತಹೀನತೆ ಇತ್ಯಾದಿಯನ್ನು ಹೋಗಲಾಡಿಸುತ್ತದೆ. ಮಲಬದ್ಧತೆ ಸಮಸ್ಯೆಗೂ ಪರಿಹಾರ ನೀಡುತ್ತದೆ.
* ಇದರಲ್ಲಿನ ಫಿನಾಲಿಕ್ ಪದಾರ್ಥ ಒಳ್ಳೆಯ ಆಂಟಿ ಆಕ್ಸಿಡೆಂಟ್ ಆಗಿ ಕೆಲಸ ಮಾಡಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ನಮ್ಮ ಸುತ್ತಮುತ್ತಲಿನ ವಸ್ತುಗಳನ್ನು ಉಪಯೋಗ ಮಾಡಿಕೊಂಡು ನಮ್ಮ ಆರೋಗ್ಯ ಕಾಪಾಡಿಕೊಳ್ಳಬಹುದು .ಪದೇ ಪದೇ ಹೋಗುವ ಆಸ್ಪತ್ರೆ ಗಳ ಕಾಟ ತಪ್ಪುವುದು.ದುಂದು ವೆಚ್ಚಗಳಿಗೆ ಕಡಿವಾಣ ಹಾಕಬಹುದು
Sunday, January 12, 2020
ಸೀತಾಫಲ ಯಾಕೆ ತಿನ್ನಬೇಕು ?
Subscribe to:
Post Comments (Atom)
ಶುಗರ್ ಹತೋಟಿಗೆ ತರಲು ಸುಲಭ ವಿಧಾನ:
ಎರಡು ಅಮೃತ ಬಳ್ಳಿ ಎಲೆಯನ್ನು ತೊಳೆದು ಸ್ವಚ್ಛ ಮಾಡಿ ನಂತರ ಜಜ್ಜಿ ರಸ ತೆಗೆದು ಎರಡು ಚಿಟಿಕೆ ಅರಿಶಿನ ಪುಡಿ ಹಾಕಿ ದಿನವೂ ಖಾಲಿ ಹೊಟ್ಟೆಯಲ್ಲಿ ಸೇವಿಸಿ 42 ದಿನ ಗಳಲ್ಲಿ ಶು...
-
ಎರಡು ಅಮೃತ ಬಳ್ಳಿ ಎಲೆಯನ್ನು ತೊಳೆದು ಸ್ವಚ್ಛ ಮಾಡಿ ನಂತರ ಜಜ್ಜಿ ರಸ ತೆಗೆದು ಎರಡು ಚಿಟಿಕೆ ಅರಿಶಿನ ಪುಡಿ ಹಾಕಿ ದಿನವೂ ಖಾಲಿ ಹೊಟ್ಟೆಯಲ್ಲಿ ಸೇವಿಸಿ 42 ದಿನ ಗಳಲ್ಲಿ ಶು...
-
ಅಳಲೆ ಕಾಯಿ , ತಾರೆ ಕಾಯಿ, ನೆಲ್ಲಿಕಾಯಿ,ಸಿಗೆ ಕಾಯಿ, ಅಂಟುವಾಳ ಕಾಯಿ, ಮೆಂತ್ಯ, ದಾಸವಾಳದ ಹೂ , ದಾಸವಾಳದ ಎಲೆ, ಮೆಹೆಂದಿ ಸೊಪ್ಪು, ನೀಲಿ ಸೊಪ್ಪು, ಭೃಂಗರಾಜ ಸೊಪ್ಪು,ಇಲ...
No comments:
Post a Comment