Sunday, January 12, 2020

ಸೀತಾಫಲ ಯಾಕೆ ತಿನ್ನಬೇಕು ?

ಅಪಾರ ವಿಟಮಿನ್-ಸಿ ಇರುವ ಹಣ್ಣು ಸೀತಾಫಲ. ಎಲ್ಲಾ ಕಾಲದಲ್ಲೂ ಈ ಹಣ್ಣು ಸಿಗುವುದಿಲ್ಲ. ದೊರಕುವಾಗ ದಿನಕ್ಕೆ ಒಂದು ಹಣ್ಣು ತಿನ್ನುವುದರಿಂದ ಅನೇಕ ರೋಗಗಳಿಂದ ದೂರವಿರಬಹುದು. ಬೇರೆ ಹಣ್ಣುಗಳಿಗೆ ಹೋಲಿಸಿದರೆ ಈ ಹಣ್ಣಿನಲ್ಲಿ ಕ್ಯಾಲೋರಿ ಹೆಚ್ಚು. ಇದರ ಇನ್ನಿತರ ಉಪಯೋಗಗಳು ಇಲ್ಲಿವೆ.


* ಹೃದಯ, ಎಲುಬು, ಚರ್ಮ ರಕ್ಷಣೆಗೆ ಸೀತಾಫಲ ಒಳ್ಳೆಯದು. ಇದರಲ್ಲಿರುವ ಪೊಟ್ಯಾಶಿಯಂ ಹೃದಯಬೇನೆ, ಪಾರ್ಶ್ವವಾಯು ಬರದಂತೆ ನೋಡಿಕೊಳ್ಳುತ್ತದೆ.


* ಕ್ರಮವಾಗಿ ಈ ಹಣ್ಣು ಸೇವಿಸುವವರಲ್ಲಿ ಕೀಲುನೋವು, ಆರ್ಥ್ರೈಟಿಸ್ ಬರುವ ಸಾಧ್ಯತೆ ಕಮ್ಮಿ. ಇದು ನೋವು ನಿವಾರಕ ಮತ್ತು ಹೊಟ್ಟೆಯಲ್ಲಿನ ಅಲ್ಸರ್ ಅನ್ನು ಗುಣಪಡಿಸುತ್ತದೆ.


* ಇದರಲ್ಲಿನ ನಾರು ಸತ್ವ ಜೀರ್ಣಕ್ರಿಯೆಗೆ ಒಳ್ಳೆಯದು. ಇದು ಕೊಲೆಸ್ಟ್ರಾಲ್ ತಗ್ಗಿಸಿ ರಕ್ತದಲ್ಲಿ ಗ್ಲೂಕೋಸ್ ಪ್ರಮಾಣವನ್ನು ನಿಯಂತ್ರಿಸುತ್ತದೆ.


* ಇದರಲ್ಲಿ ವಿಟಮಿನ್ ಎ ಅಧಿಕವಾಗಿರುತ್ತದೆ. ಇದು ದೃಷ್ಟಿ ಸ್ಪಷ್ಟತೆಗೆ ಸಹಾಯಕವಾಗಿದೆ.


* ಗರ್ಭಿಣಿಯರಿಗೆ ಇದೊಂದು ಉತ್ತಮ ಆಹಾರ. ವಾಂತಿ, ವಿಕಾರ, ರಕ್ತಹೀನತೆ ಇತ್ಯಾದಿಯನ್ನು ಹೋಗಲಾಡಿಸುತ್ತದೆ. ಮಲಬದ್ಧತೆ ಸಮಸ್ಯೆಗೂ ಪರಿಹಾರ ನೀಡುತ್ತದೆ.


* ಇದರಲ್ಲಿನ ಫಿನಾಲಿಕ್ ಪದಾರ್ಥ ಒಳ್ಳೆಯ ಆಂಟಿ ಆಕ್ಸಿಡೆಂಟ್ ಆಗಿ ಕೆಲಸ ಮಾಡಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.


No comments:

Post a Comment

ಶುಗರ್ ಹತೋಟಿಗೆ ತರಲು ಸುಲಭ ವಿಧಾನ:

ಎರಡು ಅಮೃತ ಬಳ್ಳಿ ಎಲೆಯನ್ನು ತೊಳೆದು ಸ್ವಚ್ಛ ಮಾಡಿ ನಂತರ ಜಜ್ಜಿ ರಸ ತೆಗೆದು ಎರಡು ಚಿಟಿಕೆ ಅರಿಶಿನ ಪುಡಿ ಹಾಕಿ ದಿನವೂ ಖಾಲಿ ಹೊಟ್ಟೆಯಲ್ಲಿ ಸೇವಿಸಿ 42 ದಿನ ಗಳಲ್ಲಿ ಶು...