*ಪಂಚಪ್ರಾಣಗಳು ಎಂದರೇನು ಮತ್ತು ಅದರ ಮಹತ್ವ.*
ಮೊದಲು ಪ್ರಾಣ ಎಂದರೆ ಏನು ಎನ್ನುವುದು?
*ಪ್ರಾಣ ಎಂದರೆ ವಾಯುವು, ವಾಯುವೇ ಪ್ರಾಣ.*
ಈ ವಾಯುವು ಮಾನವನ ದೇಹದಲ್ಲಿ ಐದು ಮುಖ್ಯ ವಾಯುಗಳಾಗಿ ಕಾರ್ಯವನ್ನು ನಿರ್ವಹಿಸುತ್ತದೆ. ಆ ಐದು ಮುಖ್ಯ ಕಾರ್ಯಗಳನ್ನು ಪಂಚ ಪ್ರಾಣಗಳು ಎಂದು ಕರೆಯುತ್ತೇವೆ.
ಪಂಚ ಎಂದರೆ ಐದು
ಪ್ರಾಣ ಎಂದರೆ ವಾಯು
ಜೀವಿಗಳ ದೇಹದಲ್ಲಿ ಇರುವ ಐದು ವಾಯುಗಳು...
*1. ಪ್ರಾಣ, 2. ಅಪಾನ, 3. ವ್ಯಾನ, 4. ಉದಾನ, 5. ಸಮಾನ*
*1. ಪ್ರಾಣ ವಾಯುವು* - ಮೂಗಿನ ಮುಖಾಂತರ ಹೃದಯವನ್ನು ಪ್ರವೇಶಮಾಡಿ ನಂತರ ದೇಹದ ಎಲ್ಲಾ ಭಾಗಗಳಿಗೂ ಇದು ರವಾನೆಯಾಗುತ್ತದೆ. ಅದಕ್ಕೆ ಇದನ್ನು ಪ್ರಾಣ ವಾಯು ಎಂದು ಮತ್ತು ಪಂಚ ಪ್ರಾಣಗಳಲ್ಲಿ ಇದು ಮೊದಲಿನದು.
*2. ಅಪಾನ ವಾಯುವು* - ಇದು ಪಂಚ ಪ್ರಾಣಗಳಲ್ಲಿ ಎರಡೆನೆಯದು. ಶ್ವಾಸಕೋಶ ಮತ್ತು ಇತರೆ ಕೆಲವು ಭಾಗಗಳಲ್ಲಿ ಇರುತ್ತದೆ ಮಲ ಮೂತ್ರಗಳ ವಿಸರ್ಜನೆಗೆ, ಈ ವಾಯುವು ಸಹಾಯವಾಗುತ್ತದೆ. ಇದು ಒಂದು ರೀತಿಯ Pushing ರೀತಿಯಲ್ಲಿ ಸಹಾಯ ಆಗುತ್ತದೆ.
*3. ವ್ಯಾನ ವಾಯುವು* - ಇದು ಮೂರನೇ ವಾಯು. ಇದು ಕೈಕಾಲುಗಳ, ದೇಹದ ಭಾಗಗಳು ಅಂದರೆ ದೇಹದ ಭಾಗಗಳ ಸಂಕೋಚನೆ ವ್ಯಾಕೋಚನಗಳಿಗೆ ಸಹಾಯ ಆಗುತ್ತದೆ.
ಉದಾಹರಣೆಗೆ : ಜೆ.ಸಿ.ಬಿ ಯ ಕಾರ್ಯ ವಿಧಾನವನ್ನು ಸೂಕ್ಷ್ಮವಾಗಿ ನೋಡಿದರೆ ಅರ್ಥ ಆಗುತ್ತದೆ.
*4. ಉದಾನ ವಾಯುವು* - ಇದು ನಾಲ್ಕನೇ ವಾಯು. ಇದು ವಾಕ್ಕಿಗೆ ಸಹಕಾರಿಯಾದ ವಾಯುವು.
*5. ಸಮಾನ ವಾಯು*- ಇದು ಜೀರ್ಣಾಂಗ ವ್ಯವಸ್ಥೆಗೆ ಸಹಕಾರಿ ಯಾಗುತ್ತದೆ. ತಿಂದ ಆಹಾರ ಜೀರ್ಣವಾಗಲು ಸಹಾಯಕಾರಿ.
ಇವು ಐದು ರೀತಿಯ ಪ್ರಾಣಗಳು ಅಥವಾ ಪ್ರಾಣಯಾವುಗಳು...
ಇವುಗಳನ್ನು ಸರಿಯಾಗಿ ನಿಯಂತ್ರಣದಲ್ಲಿ ಇಟ್ಟುಕೊಂಡವನು ಮಹಾನ್ ಯೋಗಿಯಾಗುತ್ತಾನೆ...
ನಮ್ಮ ಸುತ್ತಮುತ್ತಲಿನ ವಸ್ತುಗಳನ್ನು ಉಪಯೋಗ ಮಾಡಿಕೊಂಡು ನಮ್ಮ ಆರೋಗ್ಯ ಕಾಪಾಡಿಕೊಳ್ಳಬಹುದು .ಪದೇ ಪದೇ ಹೋಗುವ ಆಸ್ಪತ್ರೆ ಗಳ ಕಾಟ ತಪ್ಪುವುದು.ದುಂದು ವೆಚ್ಚಗಳಿಗೆ ಕಡಿವಾಣ ಹಾಕಬಹುದು
Monday, April 13, 2020
ಪಂಚಪ್ರಾಣಗಳು
Subscribe to:
Post Comments (Atom)
ಶುಗರ್ ಹತೋಟಿಗೆ ತರಲು ಸುಲಭ ವಿಧಾನ:
ಎರಡು ಅಮೃತ ಬಳ್ಳಿ ಎಲೆಯನ್ನು ತೊಳೆದು ಸ್ವಚ್ಛ ಮಾಡಿ ನಂತರ ಜಜ್ಜಿ ರಸ ತೆಗೆದು ಎರಡು ಚಿಟಿಕೆ ಅರಿಶಿನ ಪುಡಿ ಹಾಕಿ ದಿನವೂ ಖಾಲಿ ಹೊಟ್ಟೆಯಲ್ಲಿ ಸೇವಿಸಿ 42 ದಿನ ಗಳಲ್ಲಿ ಶು...
-
ಎರಡು ಅಮೃತ ಬಳ್ಳಿ ಎಲೆಯನ್ನು ತೊಳೆದು ಸ್ವಚ್ಛ ಮಾಡಿ ನಂತರ ಜಜ್ಜಿ ರಸ ತೆಗೆದು ಎರಡು ಚಿಟಿಕೆ ಅರಿಶಿನ ಪುಡಿ ಹಾಕಿ ದಿನವೂ ಖಾಲಿ ಹೊಟ್ಟೆಯಲ್ಲಿ ಸೇವಿಸಿ 42 ದಿನ ಗಳಲ್ಲಿ ಶು...
-
ಅಳಲೆ ಕಾಯಿ , ತಾರೆ ಕಾಯಿ, ನೆಲ್ಲಿಕಾಯಿ,ಸಿಗೆ ಕಾಯಿ, ಅಂಟುವಾಳ ಕಾಯಿ, ಮೆಂತ್ಯ, ದಾಸವಾಳದ ಹೂ , ದಾಸವಾಳದ ಎಲೆ, ಮೆಹೆಂದಿ ಸೊಪ್ಪು, ನೀಲಿ ಸೊಪ್ಪು, ಭೃಂಗರಾಜ ಸೊಪ್ಪು,ಇಲ...
-
ಬಿಸಿನೀರಲ್ಲಿ ಕೇವಲ 5 ನಿಮಿಷ ಪಾದ ಅದ್ದಿದರೆ ಯಾವೆಲ್ಲಾ ಪ್ರಯೋಜನ ಆಗುತ್ತೆ ಗೊತ್ತಾ? * ನಮ್ಮ ಕಾಲುಗಳೇ ನಮ್ಮ ದೇಹಕ್ಕೆ ಆಧಾರಸ್ತಂಭ, ನಮ್ಮ ಇಡೀ ದೇಹ ನಿಂತಿರುವುದೇ ನಮ್ಮ...
No comments:
Post a Comment